*ನಾನು ನಿಮ್ಮವನು ನಿಮ್ಮ ಮನೆ ಮಗ, ನನಗೊಂದು ಅವಕಾಶ ಕೊಡಿ: ವಿನೋದ ಅಸೂಟಿ*
ಹುಬ್ಬಳ್ಳಿ: ಕಾಂಗ್ರೆಸ್ ನನಗೆ ಅವಕಾಶ ಮಾಡಿಕೊಟ್ಟಿದೆ. ನಿಮ್ಮೆಲ್ಲರ ಆಶೀರ್ವಾದ ನನಗಿರಲಿ ಎಂದು ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿಯವರು ಮತದಾರರಿಗೆ ಮನವಿ ಮಾಡಿದ್ದಾರೆ.
ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ತಳ ಮಟ್ಟದಿಂದ ಈ ಹಂತಕ್ಕೆ ಬಂದಿದ್ದೇನೆ. ನಾನು ಕೂಡ ಕಾಂಗ್ರೆಸ್ ಕಟ್ಟಾ ಅಭಿಮಾನಿ. ನನಗೆ ತಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದರು.
ಅಂಬೇಡ್ಕರ್ ನಮ್ಮೆಲ್ಲರಿಗೂ ಅವಕಾಶ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ವ ಧರ್ಮ ಪಕ್ಷ. ಕಾಂಗ್ರೆಸ್ ಐದು ಗ್ಯಾರಂಟಿ ರಾಜ್ಯದ ಜನತೆಗೆ ಕೊಟ್ಟಿದೆ. ಈ ಗ್ಯಾರಂಟಿ ಕೇವಲ ಒಂದು ಜಾತಿಗೆ ಸೀಮಿತವಲ್ಲ ಎಂದು ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅಸೂಟಿ ಹೇಳಿದರು.