Breaking News

ಶ್ರೀ ದಿಂಗಾಲೇಶ್ವರ ಸ್ವಾಮೀಜಿ ನಡೆ ಭಾರೀ ಕುತೂಹಲ ಕಡೆ

Spread the love

– ಧಾರವಾಡ ಲೋಕಸಭಾ ಬಿಜೆಪಿ‌ ಅಭ್ಯರ್ಥಿ ಜೋಶಿ ಬದಲಾವಣೆಗೆ ಪಟ್ಟು ಹಿಡದಿರೋ ದಿಂಗಲೇಶ್ವರರಿಂದ ಭಕ್ತರ ಸಭೆ….ಧಾರವಾಡದಲ್ಲಿ ಭಕ್ತರ ಸಭೆ ಮಾಡುತ್ತಿರುವ ಶ್ರೀಗಳು.

: ದಿನಕಳೆದಂತೆ ಧಾರವಾಡದಲ್ಲಿ ಲೋಕಸಭಾ ಚುನಾವಣೆ ಕಾವು ಏರುತ್ತಿದೆ. ಅಭ್ಯರ್ಥಿಗಳು ಈಗಾಗಲೇ ಚುನಾವಣೆ ತಯಾರಿಲ್ಲಿದ್ದು, ಆದರೆ ಕೇಂದ್ರ ಸರಕಾರದ ಹಾಲಿ ಸಚಿವರಾಗಿರುವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿಯವರ ಬದಲಾವಣೆಗೆ ಪಟ್ಟು ಹಿಡಿದಿರುವ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಶ್ರೀಗಳು ಇಂದು ಧಾರವಾಡದಲ್ಲಿ ಭಕ್ತರ ಸಭೆ ಕರೆದಿದ್ದು, ಸಭೆಗೆ ಈಗ ಆರಂಭವಾಗಿದೆ.

– ಧಾರವಾಡದ ಸೇವಾಲಯದಲ್ಲಿ ಶ್ರೀಗಳು ಭಕ್ತರ ಸಭೆ ಕರೆದಿದ್ದು, ಈಗಾಗಲೇ ನೂರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದಾರೆ.‌ ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ಸಭೆ ಈಗ ಆರಂಭವಾಗಿದೆ. ವೇದಿಕೆಯಲ್ಲಿ ಒಂದೇ ಒಂದು ಆಸನವನ್ನ ಹಾಕಲಾಗಿದ್ದು, ಬೇರೆ ಯಾವುದೇ ಮಠದ ಸ್ವಾಮಿಗಳು ಭಕ್ತರ ಸಭೆಯಲ್ಲಿ ಭಾಗವಹಿಸಿಲ್ಲ. ಇನ್ನೂ ಶ್ರೀಗಳು ತಾವು ತೆಗೆದುಕೊಂಡ ಧಾರವಾಡ ಲೋಕಸಭಾ ಅಭ್ಯರ್ಥಿ ಜೋಶಿ ಬದಲಾವಣೆ ನಿರ್ಧಾರ ಹಾಗೂ ಬಿಜೆಪಿ ನಾಯಕರ ನಡೆಯ ಬಗ್ಗೆ ಭಕ್ತರ ಮುಂದೆ ತೆರೆದಿಟ್ಡು, ಭಕ್ತರ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಬಳಿಕ ಸಭೆಯಲ್ಲಿ ಕೆಲವು ನಿರ್ಣಯ ತೆಗೆದುಕೊಳ್ಳಲಿದ್ದು, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಲಿದ್ದಾರೆ.‌ ಈಗಾಗಲೇ ಪ್ರಹ್ಲಾದ್ ಜೋಶಿಯವರ ವಿರುದ್ಧ ನಮ್ಮ ಸಮರ ನಿಲ್ಲುವುದಿಲ್ಲ ಎಂದು ಶ್ರೀಗಳ ಸ್ಪಷ್ಟಪಡಿಸಿದ್ದು, ಈಗ ದಿಂಗಾಲೇಶ್ವರ ಶ್ರೀಗಳ ಭಕ್ತರ ಸಭೆ ತೀವ್ರ ಕುತೂಹಲ ಮೂಡಿಸಿದೆ.


Spread the love

About Karnataka Junction

[ajax_load_more]

Check Also

*ಬಂದ್ ಎನ್ನುವ ಕಾನ್ಸೆಪ್ಟ್ ಇಲ್ಲ ‌ಬಲವಂತವಾಗಿ ಬಂದ್ ಮಾಡಿಸುವ ಹಾಗಿಲ್ಲ- ಪೊಲೀಸ್ ಕಮೀಷನರ್ ಖಡಕ್ ಎಚ್ಚರಿಕೆ

Spread the loveಹುಬ್ಬಳ್ಳಿ: ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಬಲವಂತವಾಗಿ ಬಂದ್ ಮಾಡಿಸುವ …

Leave a Reply

error: Content is protected !!